ಭೂ ಸ್ವಾಧೀನ ಕಾಯಿದೆ: ಸೋನಿಯಾ ದೇಶದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಗಡ್ಕರಿ

ಮಂಗಳವಾರ, 31 ಮಾರ್ಚ್ 2015 (15:32 IST)
ಭೂ ಸ್ವಾಧೀನ ಕಾಯಿದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿ ಆರೋಪಿಸಿದ್ದಾರೆ. 

ಅಲ್ಲದೇ ದೇಶದಲ್ಲಿನ ನಿರುದ್ಯೋಗ ಸಮಸ್ಯೆಗೆ ಮತ್ತು ರೈತರ ಆತ್ಮಹತ್ಯೆಗೆ ಯುಪಿಯ ಸರಕಾರದ ನೀತಿಗಳೇ ಕಾರಣ ಎಂದವರು ಜರಿದಿದ್ದಾರೆ. 
 
ಕಳೆದ ಸೋಮವಾರ ಸೋನಿಯಾ ಭೂ ಸ್ವಾಧೀನ ಕಾಯಿದೆಯನ್ನು ವಿರೋಧಿಸಿ ತಾವು ಎಪ್ರೀಲ್ 20 ರಂದು ರಾಮಲೀಲಾ ಮೈದಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ರೈತರ ಮೆರವಣಿಗೆಯನ್ನು ನಡೆಸುತ್ತೇನೆ ಎಂದು ಹೇಳಿದ್ದರು. 
 
ವರದಿಗಳ ಪ್ರಕಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಆ ಸಮಯದಲ್ಲಿ ಉಪಸ್ಥಿತರಿರಲಿದ್ದಾರೆ. 
 
ಮಾರ್ಚ್ 17 ರಂದು ಸಹ ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ ಸೋನಿಯಾ ನೇತೃತ್ವದಲ್ಲಿ ಪಾರ್ಲಿಮೆಂಟ್‌ನಿಂದ ರಾಷ್ಟ್ರಪತಿ ಭವನದವರೆಗೆ ಪ್ರತಿಭಟನೆ ಕೈಗೊಂಡಿದ್ದರು. 

ವೆಬ್ದುನಿಯಾವನ್ನು ಓದಿ