ಆಧಾರ್ ಕಾರ್ಡ್ ಇಲ್ಲವೆಂದು ಬಾಲಕಿಗೆ ಚಿಕಿತ್ಸೆ ನಿರಾಕರಿಸಿದ ಆಸ್ಪತ್ರೆ!

ಶುಕ್ರವಾರ, 12 ಅಕ್ಟೋಬರ್ 2018 (08:17 IST)
ನವದೆಹಲಿ: ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಅನಾರೋಗ್ಯ ಪೀಡಿತ ಬಾಲಕಿಗೆ ಚಿಕಿತ್ಸೆ ನಿರಾಕರಿಸಿದ ಘಟನೆ ನಡೆದಿದೆ.

ಈ ವಿಚಾರವನ್ನು ದೆಹಲಿಯ ಬಿಜೆಪಿ ನಾಯಕ ಮನೋಜ್ ತಿವಾರಿ ಟ್ವೀಟ್ ಮೂಲಕ ಹೇಳಿಕೊಂಡಿದ್ದು, ಕೇಜ್ರಿವಾಲ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾಗೆ ಟ್ಯಾಗ್ ಮಾಡಿ ಬಾಲಕಿಗೆ ಚಿಕಿತ್ಸೆ ಕೊಡಿಸಲು ನೆರವಾದರೆ ಅದುವೇ ನವರಾತ್ರಿ ಹಬ್ಬದ ನಿಜವಾದ ಆಚರಣೆ ಮಾಡಿದಂತೆ ಎಂದು ಮನವಿ ಮಾಡಿದ್ದರು.

ಮನೋಜ್ ತಿವಾರಿ ಟ್ವೀಟ್ ಗೆ ತಕ್ಷಣ ಸ್ಪಂದಿಸಿದ ಸಚಿವರು ಆ ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಹಾಗೂ ಟ್ವೀಟ್ ಮೂಲಕವೇ ಈ ವಿಚಾರದಲ್ಲಿ ಮನೋಜ್ ತಿವಾರಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ