ಅತ್ಯಾಚಾರ ಎಸಗಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ

ಗುರುವಾರ, 12 ಜನವರಿ 2017 (10:14 IST)
ಕೀಚಕ ಮನಸ್ಸಿನ ವ್ಯಕ್ತಿಯೊಬ್ಬ 16 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿ ಕೊಂದ ಅಮಾನುಷ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಮುಧೋಳ ತಾಲ್ಲೂಕಿನ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ. 
 
ಆರೋಪಿಯನ್ನು ಲೋಕೇಶ್ ಲಮಾಣಿ ಎಂದು ಗುರುತಿಸಲಾಗಿದ್ದು ಬುಧವಾರ-ಗುರುವಾರದ ನಡುವಿನ ರಾತ್ರಿ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಬಾಲಕಿ ಸಹೋದರಿಯ ಜತೆ ವಾಸಿಸುತ್ತಿದ್ದು ಪೋಷಕರು ಅಲೆಮಾರಿ ಕೂಲಿ ಕಾರ್ಮಿಕರಾಗಿದ್ದು ತಾಯಿ ಗೋವಾದಲ್ಲಿ ಕೂಲಿ ಕೆಲಸವನ್ನು ಹುಡುಕಿಕೊಂಡು ಹೋಗಿದ್ದಾಳೆ. ನಿನ್ನೆ ಆಕೆ ಸಹೋದರಿಯ ಜತೆ ಮಲಗಿದ್ದಳು.ರಾತ್ರಿ 1 ಗಂಟೆ ಸುಮಾರಿಗೆ ಅವರ ಮನೆಗೆ ನುಗ್ಗಿದ 22 ವರ್ಷದ ಲೋಕೇಶ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
 
ಆತನ ರಾಕ್ಷಸೀತನ ಅಲ್ಲಿಗೆ ಕೊನೆಗೊಂಡಿಲ್ಲ. ಆಕೆಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾನೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ