ನಾಯಿಗಳ ದಾಳಿಗೆ ಬಾಲಕ ಬಲಿ!

ಭಾನುವಾರ, 12 ಜೂನ್ 2022 (10:03 IST)
ಮುಂಬೈ : ಬೀದಿ ನಾಯಿಗಳ ದಾಳಿಯಿಂದಾಗಿ ಓರ್ವ ಪುಟ್ಟ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ಪಟ್ಟಣದ ಧಂತೋಳಿ ಪ್ರದೇಶದಲ್ಲಿ ನಡೆದಿದೆ.

ವಿರಾಜ್ ರಾಜು ಜಯವರ್ (05) ನಾಯಿ ದಾಳಿಗೊಳಗಾಗಿ ಮೃತಪಟ್ಟಿರುವ ಬಾಲಕ. ತನ್ನ ಸಹೋದರಿಯೊಂದಿಗೆ ವಾಕಿಂಗ್ಗೆ ತೆರಳಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿವೆ.

ಈ ವೇಳೆ ಸಹೋದರಿ ನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ನಾಯಿಗಳು ವಿರಾಜ್ ರಾಜು ಜಯವರ್ ಮೇಲೆ ದಾಳಿ ಮಾಡಿವೆ ಎಂದು ತಿಳಿಸಿದ್ದಾರೆ.

ಘಟನೆ ಬಳಿಕ ಪೋಷಕರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ತದ ಮಡುವಿನಿಂದ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ವಿರಾಜ್ ರಾಜ್ ಜಯವರ್ ಸಾವನ್ನಪ್ಪಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ