ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಜೆಟ್ ಮಂಡಿಸಿದ ಗೋವಾ ಸಿಎಂ ಪರಿಕ್ಕರ್‌

ಗುರುವಾರ, 22 ಫೆಬ್ರವರಿ 2018 (20:54 IST)
ಆಸ್ಪತ್ರೆಯಿಂದ ಬಿಡುಗಡೆಯಾದ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ನೇರವಾಗಿ ಬಜೆಟ್ ಅಧಿವೇಶನಕ್ಕೆ ತೆರಳಿ ಬಜೆಟ್ ಮಂಡನೆ ಮಾಡಿದ್ದಾರೆ.

ಫೆ.15ರಂದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 

ಆರೋಗ್ಯ ಗುಣಮುಖವಾಗಿದ್ದು, ಮುಖ್ಯಮಂತ್ರಿಯಾಗಿ ಎಂದಿನಂತೆ ಕರ್ತವ್ಯಗಳನ್ನು ನಿಭಾಯಿಸುವುದಾಗಿ ತಿಳಿಸಿರುವ ಅವರು ವೈದ್ಯರ ಸಲಹೆಯ ಮೇರೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಕಡಿಮೆ ಮಾಡುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ