ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ನಿಜವಾದ ಹೋರಾಟ ನಡೆಯುವುದು ಆಡಳಿತಾರೂಢ ಬಿಜೆಪಿ ಮತ್ತು ಆಪ್ ನಡುವೆ. ಕಾಂಗ್ರೆಸ್ಗೆ ಒಂದೇ ಒಂದು ಸೀಟ್ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಆಪ್ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದಕ್ಷಿಣ ಗೋವಾದ ಕ್ಯೂಪೆಮ್ ಗ್ರಾಮದಲ್ಲಿ ಎಸ್ಸಿ/ಎಸ್ಟಿ ಸಮುದಾಯದವರನ್ನು ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ನಾವು ಗೋವಾವನ್ನು ಕಳೆದುಕೊಳ್ಳಲಿದ್ದೇವೆ ಎಂಬ ಭಯ ಹುಟ್ಟಿಕೊಂಡಾಗಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರಾಖಂಡ, ಉತ್ತರ ಪ್ರದೇಶಗಳಿಗೆ ಹೋಗುವ ಬದಲು ಗೋವಾದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.