ಕೇರಳದಾದ್ಯಂತ ಬೀದಿನಾಯಿಗಳ ಕಾಟ ವಿಪರೀತವಾಗಿದ್ದು, ವಾರದೊಳಗೆ ನಾಲ್ವರು ಬಲಿಯಾಗಿರುವ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಅತಿ ಹೆಚ್ಚು ಬೀದಿ ನಾಯಿಗಳನ್ನು ಹತ್ಯೆ ಮಾಡುವ ಪುರಸಭೆ, ನಗರಸಭೆ ಮತ್ತು ಕಾರ್ಪೋರೇಶನ್ ಅಧಿಕಾರಿಗಳಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಕೇರಳದ ವಿದ್ಯಾರ್ಥಿ ಸಂಘಟನೆಯೊಂದು ಘೋಷಿಸಿದೆ.