ಅನರ್ಹ ಶಾಸಕರಿಗೆ ಗುಡ್ ನ್ಯೂಸ್; ಇಂದೇ ಅರ್ಜಿ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್

ಮಂಗಳವಾರ, 22 ಅಕ್ಟೋಬರ್ 2019 (09:16 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್ ಇಂದೇ ವಿಚಾರಣೆ ನಡೆಸಲು ನಿರ್ಧಾರ ಮಾಡಿದೆ.




ಇಂದು ನಡೆಯಬೇಕಾಗಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಕಾಂಗ್ರೆಸ್ ಪರ ವಕೀಲರ ಮನವಿಯ ಮೇರೆಗೆ ಅ.23ಕ್ಕೆ ಮುಂದೂಡಲಾಗಿತ್ತು. ಆದರೆ ಇದೀಗ ಚುನಾವಣೆ ಹಿನ್ನಲೆಯಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಆದಷ್ಟು ಬೇಗ ಇತ್ಯರ್ಥ ಮಾಡಿಕೊಡಬೇಕೆಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.


ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಇಂದೇ ನಡೆಸಲು ತೀರ್ಮಾನಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ