ಕಳೆದ ಮೂರು ದಿನಗಳ ಹಿಂದೆ ಶಿಲ್ಲಾಂಗ್ನಲ್ಲಿ ಉಪನ್ಯಾಸ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ ಕಲಾಂ ಅವರ ಅಂತ್ಯಕ್ರಿಯೆ ಇಂದು ಅವರ ತವರು ರಾಮೇಶ್ವರಂನಲ್ಲಿ ನಡೆಯಿತು. ಪ್ರಧಾನಿ ಮೋದಿ, ರಕ್ಷಣಾ ಸಚಿವ ಮನೋಹರ ಪರಿಕ್ಕರ್, ವೆಂಕಯ್ಯನಾಯ್ಡು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕ, ಕೇರಳ, ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಗಣ್ಯರು ಅಗಲಿದ ಮಹಾ ಆತ್ಮಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.