ಯೋಜನೆ ಜಾರಿಗೆ ಆಗ್ರಹಿಸಿ ನಿವೃತ್ತ ಸೈನಿಕರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಸೃಷ್ಟಿಯಾಗಿತ್ತು. ಅವರ ಪ್ರಮುಖ ಬೇಡಿಕೆಯಂತೆ ವರ್ಷ ವರ್ಷ ಪಿಂಚಣಿ ಪರಿಷ್ಕರಣೆ ಮಾಡುವುದಕ್ಕೆ ಕೇಂದ್ರ ಒಪ್ಪದ್ದರಿಂದ ಒಮ್ಮತ ಮೂಡಿರಲಿಲ್ಲ.
ಮತ್ತೆರಡು ದಿನಗಳಲ್ಲಿ ಬಿಹಾರ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಲಿದೆ.