ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲ

ಶನಿವಾರ, 23 ಜುಲೈ 2022 (18:11 IST)
ಹೈದರಾಬಾದ್ : ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಶನಿವಾರ ಮುಂಜಾನೆ ದೆಹಲಿ-ಹೈದರಾಬಾದ್ ವಿಮಾನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನಿಗೆ ಗೋಲ್ಡನ್ ಅವರ್ ಚಿಕಿತ್ಸೆ ನೀಡಿದರು.

ರಾಜಕೀಯ ಪ್ರವೇಶಿಸುವ ಮೊದಲು ವೈದ್ಯರಾಗಿದ್ದ ಸೌಂದರರಾಜನ್, ಪ್ರಯಾಣಿಕನಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆಯನ್ನು ಕೊಟ್ಟು ಸಹಾಯಕ ಔಷಧಿಗಳನ್ನು ನೀಡಿದರು. ಇದರಿಂದ ಸಹ-ಪ್ರಯಾಣಿಕರು ಸಂತೋಷ ವ್ಯಕ್ತಪಡಿಸಿದ್ದು, ಧನ್ಯವಾದವನ್ನು ಹೇಳಿದ್ದಾರೆ.

ಈ ಕುರಿತು ರವಿ ಚಂದರ್ ನಾಯ್ಕ ಮುದವತ್ ಅವರು ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಸಂತೋಷ ವ್ಯಕ್ತಪಡಿಸಿದರು. 
.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ