ಕೊರೋನಾ ಮೂರನೇ ಅಲೆ ತಡೆಯಲು ಸರ್ಕಾರದ ಸಿದ್ಧತೆ ಶುರು
ಮುಂದಿನ ತಿಂಗಳು ಕೊರೋನಾ ಮೂರನೇ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಭವಿಷ್ಯ ನುಡಿದಿದ್ದರು. ಅದಕ್ಕೆ ತಕ್ಕಂತೇ ಈಗ ಮತ್ತೆ ಕೆಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದು ಎಚ್ಚರಿಕೆಯ ಕರೆಗಂಟೆಯಾಗಿದೆ. ಪ್ರಧಾನಿ ಮೋದಿ ಕೂಡಾ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಕೇಂದ್ರದಿಂದ ಬಿಡುಗಡೆ ಮಾಡಬಹುದಾದ ಪರಿಹಾರ ಹಣ ಬಿಡುಗಡೆ ಮಾಡಿ ರಾಜ್ಯಗಳಿಗೆ ಕೊರೋನಾ ವಿರುದ್ಧ ಹೋರಾಡಲು ನೆರವಾಗಲು ಮುಂದಾಗಿದೆ.