ಸೋನಿಯಾರಿಂದ ರಾಖಿ ಕಟ್ಟಿಸಿಕೊಳ್ಳಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು

ಶನಿವಾರ, 5 ಆಗಸ್ಟ್ 2017 (17:22 IST)
ಗುಜರಾತ್ ಕಾಂಗ್ರೆಸ್ ಶಾಸಕರು ನಾಳೆ ದೆಹಲಿಗೆ ತೆರಳುತ್ತಿದ್ದು, ನಾಡಿದ್ದು ರಕ್ಷ ಬಂಧನ ಅಂಗವಾಗಿ ಸೋನಿಯಾ ಗಾಂಧಿಯವರಿಂದ ರಾಖಿ ಕಟ್ಟಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈಗಲ್‌ಟನ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು, ನಾಳೆ ನವದೆಹಲಿಗೆ ತೆರಳಲಿದ್ದು, ಅಂದು ರಾತ್ರಿ ಸೋನಿಯಾ ಅವರೊಂದಿಗೆ ಭೋಜನಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. 
 
ನಾಡಿದ್ದು ರಕ್ಷ ಬಂಧನ ಹಬ್ಬದ ಅಂಗವಾಗಿ ಗುಜರಾತ್ ಕಾಂಗ್ರೆಸ್ ಶಾಸಕರು ಸೋನಿಯಾ ನಿವಾಸಕ್ಕೆ ತೆರಳಿ ರಾಖಿ ಕಟ್ಟಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
ಆಗಸ್ಟ್ 8 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವುದರಿಂದ ಶಾಸಕರು ನವದೆಹಲಿಯಿಂದ ನೇರವಾಗಿ ಚುನಾವಣೆ ಕಣಕ್ಕೆ ಎಂಟ್ರಿ ಕೊಟ್ಟು ಮತ ಚಲಾಯಿಸಲಿದ್ದಾರೆ ಎನ್ನಲಾಗಿದೆ.  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ