ಗುಜರಾತ್: ಬಂಡುಕೋರ ನಾಯಕರಿಗೆ ಬಿಸಿ ಮುಟ್ಟಿಸಿದ ಅಮಿತ್ ಶಾ

ಭಾನುವಾರ, 3 ಡಿಸೆಂಬರ್ 2017 (16:41 IST)
ಗುಜರಾತ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರಿಂದ ಬಂಡಾಯವಾಗಿ ಸ್ಪರ್ಧಿಸಿರುವ 24 ನಾಯಕರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗೆ ಮುಳುವಾಗುತ್ತಿರುವುದು ಕಂಡ ಅಮಿತ್ ಶಾ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಆದೇಶ ಹೊರಡಿಸಿದ್ದಾರೆ. 
 
ಅಮಾನತುಗೊಂಡ ಬಿಜೆಪಿ ನಾಯಕರಲ್ಲಿ ಮಾಜಿ ಸಂಸದರು, ಶಾಸಕರು ಜಿಪಂ ಅಧ್ಯಕ್ಷರು ಸೇರಿದಂತೆ ಇನ್ನಿತರ ನಾಯಕರಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ಬಿಜೆಪಿ ಪಕ್ಷದ ಶಿಸ್ತು ಉಲ್ಲಂಘಿಸುವವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ