ಸುಪ್ರೀಂ ಕೋರ್ಟ್ನಿಂದ ನೇಮಕಗೊಂಡಿದ್ದ ಎಸ್ಐಟಿಯನ್ನು ಪ್ರತಿನಿಧಿಸುತ್ತಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಆರ್. ಸಿ. ಕೋಡೇಕರ್ ಅವರು ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ಎಲ್ಲ 24 ಅಪರಾಧಿಗಳಿಗೆ ಮರಣ ದಂಡನೆ ಅಥವಾ ಸಾಯುವ ತನಕದ ಜೈಲು ವಾಸದ ಶಿಕ್ಷೆಗಿಂತ ಕಡಿಮೆ ಪ್ರಮಾಣದ ಶಿಕ್ಷೆಯನ್ನು ನೀಡಬೇಡಿ ಎಂದು ಕೇಳಿಕೊಂಡಿದ್ದರು. ಪೀಡಿತರ ಪರವಾಗಿ ವಾದಿಸಿದ್ದ ವಕೀಲ ಎಸ್.ಎಮ್, ವೋರಾ ಸಹ ಇದೇ ವಾದವನ್ನು ಮುಂದಿಟ್ಟಿದ್ದರು.