ಜುಲೈ 26-27ರ ರಾತ್ರಿ ರಾವಿ ನದಿ ದಾಟಿ ಉಗ್ರರು ಭಾರತವನ್ನು ಪ್ರವೇಶಿಸಿದ್ದರು ಎಂದು ತಿಳಿದು ಬಂದಿದ್ದು ಅವರು ಅನೇಕ ಪ್ರದೇಶಗಳಲ್ಲಿ ದಾಳಿ ನಡೆಸುವ ಯೋಜನೆಯನ್ನು ಹೊಂದಿದ್ದರು ಎಂದು ತನಿಖೆಯಿಂದ ಗೊತ್ತಾಗಿದೆ. ಸೇನಾ ಸಮವಸ್ತ್ರದಲ್ಲಿದ್ದ ಭಾರೀ ಶಸ್ತ್ರಸಜ್ಜಿತ ಮೂವರು ಉಗ್ರರು ಸೋಮವಾರ ಬೆಳಗಿನ ಜಾವ 4.55ರ ಸುಮಾರಿಗೆ ರಸ್ತೆಯಲ್ಲಿ ಓಡಾಡುತ್ತಿದ್ದ ದೃಶ್ಯಗಳು ಸಹ ಪೊಲೀಸರಿಗೆ ಸಿಕ್ಕಿವೆ.
"ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ (ಜಿಪಿಎಸ್)ನಿಂದ ಸಂಗ್ರಹಿಸಿರುವ ಡೇಟಾ ಪ್ರಕಾರ ಮೂವರು ಭಯೋತ್ಪಾದಕರು, ಭಾನುವಾರ ಮತ್ತು ಸೋಮವಾರದ ನಡುವಿನ ರಾತ್ರಿ ಪಾಕಿಸ್ತಾನದ ಶಕರ್ಗಢದ ಘಾರೋಟ್ನಿಂದ ಅಂತರಾಷ್ಟ್ರೀಯ ಗಡಿಯಾದ ಪಠಾನ್ಕೋಟ್ನ ಬಮಿಯಾಲ್ ನಗರದ ಮೂಲಕ ಭಾರತಕ್ಕೆ ನುಸುಳಿದ್ದರು ಎಂದು ಮೂಲಗಳು ತಿಳಿಸಿವೆ.