ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ!

ಗುರುವಾರ, 8 ಡಿಸೆಂಬರ್ 2022 (13:08 IST)
ನವದೆಹಲಿ : ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.
 
ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 7 ರಂದು ಇದರ ತೀವ್ರತೆ ಹೆಚ್ಚಾಗಲಿದೆ.

ಡಿಸೆಂಬರ್ 8 ರಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ತಲುಪಲಿದ್ದು, ನೈಋತ್ಯ ಬಂಗಾಳಕೊಲ್ಲಿ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ