ಬೆದರಿಕೆ ಪತ್ರದ ಕುರಿತು ಮಾಹಿತಿ ಪಡೆದ ಸರ್ಕಾರ ದೇವಸ್ಥಾನಕ್ಕೆ ಬಿಗಿ ಭದ್ರತೆಯನ್ನು ಒದಗಿಸಿದ್ದು, ಹೈ ಅಲರ್ಟ್ ಘೋಷಿಸಿದೆ. ಜತೆಗೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಬಾಂಬ್ ನಿಷ್ಕ್ರೀಯ ದಳ ಸ್ಥಳದಲ್ಲಿ ಪರಿಶೀಲನೆಯನ್ನು ಕೈಗೊಂಡಿದೆ. ಆದರೆ ಶೋಧನೆಯಲ್ಲಿ ಯಾವುದೇ ಅಪಾಯಕಾರಿ ವಸ್ತುವೂ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.