ನಿರ್ಭಯಾ ಅತ್ಯಾಚಾರ ಆರೋಪಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಗೃಹಸಚಿವಾಲಯ
ಇದೀಗ ಕೇಂದ್ರ ಗೃಹ ಸಚಿವಾಲಯವೂ ನಿರ್ಭಯಾ ರೇಪಿಸ್ಟ್ ಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ ಗಲ್ಲು ಶಿಕ್ಷೆ ಖಾಯಂಗೊಳಿಸಲು ಶಿಫಾರಸ್ಸು ಮಾಡಿದೆ. ಇದರಿಂದಾಗಿ ರಾಷ್ಟ್ರಪತಿಗಳು ಕ್ಷಮಾದಾನ ನೀಡುವ ಸಂಭವ ಕ್ಷೀಣವಾಗಿದೆ. ಅದೂ ಅಲ್ಲದೆ, ಇಂತಹ ಆರೋಪಿಗಳಿಗೆ ವಿನಾಯ್ತಿ ನೀಡಬಾರದು ಎಂದು ಸ್ವತಃ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ನಿರ್ಭಯಾ ಆರೋಪಿಗಳಿಗೆ ಗಲ್ಲು ಖಾಯಂ ಆದಂತಾಗಿದೆ. ಎಲ್ಲವೂ ಸರಿ ಹೋದರೆ ಈ ತಿಂಗಳೇ ಕಾಮುಕರಿಗೆ ಗಲ್ಲು ಶಿಕ್ಷೆ ಜಾರಿಯಾಗುವ ಸಾಧ್ಯತೆಯಿದೆ. ಇವೆರಡೂ ಘಟನೆಗಳೂ ಅತ್ಯಾಚಾರಿಗಳಿಗೆ ತಕ್ಕ ಪಾಠವಾಗಲಿದೆ.