ಶ್ರದ್ಧಾ ಹತ್ಯೆ : ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

ಬುಧವಾರ, 8 ಮಾರ್ಚ್ 2023 (10:24 IST)
ನವದೆಹಲಿ : ಲಿವ್ ಇನ್ ಗೆಳತಿ ಶ್ರದ್ಧಾ ವಾಕರ್ನನ್ನು ಹತ್ಯೆ ಮಾಡಿದ್ದ ಅಫ್ತಾಬ್ ಬಾಣಸಿಗನಾಗಿದ್ದು, ಮಾಂಸವನ್ನು ಹೇಗೆ ಸಂರಕ್ಷಿಸಬೇಕು ಎಂಬುದನ್ನು ತರಬೇತಿ ಪಡೆದಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
 
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿಯಲ್ಲಿ ಶ್ರದ್ಧಾ ವಾಕರ್ ಹತ್ಯೆಗೆ ಸಂಬಂಧಿಸಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಕೆಲವು ವಿಷಯಗಳನ್ನು ಬಾಯ್ಬಿಟ್ಟಿದ್ದು, ಈ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಫ್ತಾಬ್ ತಾಜ್ ಹೋಟೆಲ್ನಲ್ಲಿ ತರಬೇತಿ ಪಡೆಯುತ್ತಿದ್ದು, ಮಾಂಸವನ್ನು ಹೇಗೆ ರಕ್ಷಿಸಬೇಕು ಎನ್ನುವುದನ್ನು ತಿಳಿದಿದ್ದ. ಅಷ್ಟೇ ಅಲ್ಲದೇ ಅಫ್ತಾಬ್ ತನ್ನ ಗೆಳತಿ ಶ್ರದ್ಧಾಳನ್ನು ಕೊಂದ ನಂತರ ನೆಲವನ್ನು ಸ್ವಚ್ಛಗೊಳಿಸಲು ಡ್ರೈ ಐಸ್, ಅಗರ ಬತ್ತಿ ಹಾಗೂ ರಾಸಾಯನಿಕಗಳನ್ನು ಬಳಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ