ಜನತಾ ಪರಿವಾರ ಒಂದು ವೇಳೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಲ್ಲಿ ಕೇಂದ್ರ ಸರಕಾರದ ಪ್ಯಾಕೇಜ್ಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನೀಡಿದ ಹೇಳಿಕೆಗೆ ಕಿಡಿಕಾರಿದ ನಿತೀಶ್, ರಾಜ್ಯದ ಅಭಿವೃದ್ಧಿಗಾಗಿ ಸಂಪನ್ಮೂಲ ಹೆಚ್ಚಿಸುವ ಸಾಮರ್ಥ್ಯ ನನಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೆಡಿಯು ಪಕ್ಷದ ಅಭ್ಯರ್ಥಿಗಳಾದ ದಾಮೋದರ್ ರೌವತ್, ಡಾ.ರವೀಂದ್ರ ಯಾದವ್ ಪರ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ನಿತೀಶ್, ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು ಸಮಾಜವನ್ನು ಇಬ್ಬಾಗಿಸುವ ಕೃತ್ಯದಲ್ಲಿ ತೊಡಗಿದೆ. ಇಂತಹ ಪಕ್ಷವನ್ನು ತಿರಸ್ಕರಿಸಿ ಎಂದು ಕರೆ ನೀಡಿದರು.