ಭಾನುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡುತ್ತಿದ್ದ ಮುಲಾಯಂ, ಈಗಲೂ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ. ಈ ಹಿಂದೆ ನಡೆದ ಪಕ್ಷದ ಕಾರ್ಯಕಾರಣಿ ಸಭೆ ಅಸಂವಿಧಾನಿಕ. ಪಕ್ಷದಿಂದ 6 ವರ್ಷಗಳ ಮಟ್ಟಿಗೆ ಉಚ್ಚಾಟಿತರಾಗಿರುವ ರಾಮ್ ಗೋಪಾಲ್ಗೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆಯುವ ಅಧಿಕಾರವಿಲ್ಲ. ಸಹೋದರ ಶಿವಪಾಲ್ ಈಗಲೂ ಪಕ್ಷದ ರಾಜ್ಯಾಧ್ಯರಾಗಿದ್ದಾರೆ, ಪಕ್ಷಕ್ಕೆ ಸಂಬಂಧಿಸಿದ ಇತರರ ಸಹಿಗಳೆಲ್ಲ ನಕಲಿ ಎಂದು ಸ್ಪಷ್ಟ ಪಡಿಸಿದ್ದಾರೆ.