ರಾಜಕಾರಣಕ್ಕೆ ದೇಶವನ್ನು ಕಳೆದುಕೊಳ್ಳಲು ಬಯಸಲ್ಲ : ರಾಹುಲ್ ಗಾಂಧಿ

ಗುರುವಾರ, 8 ಸೆಪ್ಟಂಬರ್ 2022 (12:42 IST)
ಚೆನ್ನೈ : ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಚಾಲನೆ ಸಿಕ್ಕಿದೆ.

ಈ ವೇಳೆ ತಂದೆ ರಾಜೀವ್ ಗಾಂಧಿಯನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, ದ್ವೇಷ ಹಾಗೂ ವಿಭಜನೆ ರಾಜಕೀಯದ ಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ ಎಂದು ಹೇಳಿದರು.

ಭಾರತ್ ಜೋಡೋ ಆರಂಭಿಸುವುದಕ್ಕೂ ಮುನ್ನ ರಾಹುಲ್ ಗಾಂಧಿ ಶ್ರೀಪೆರಂಬೂರ್ನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಸ್ಮಾರಕದ ಆವರಣದಲ್ಲಿ ಗಿಡ ನೆಟ್ಟು, ತಂದೆಯನ್ನು ಸ್ಮರಿಸಿದರು. ಈ ವೇಳೆ ರಾಹುಲ್ಗೆ ಡಿಕೆಶಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ಸಾಥ್ ನೀಡಿದರು.

ಇದರ ಫೋಟೋಗಳನ್ನು ಟ್ವೀಟ್ ಮಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ವಿಭಜನೆ ರಾಜಕೀಯದ ಕಾರಣ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ನಾನು ನನ್ನ ದೇಶವನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಆಸೆ ಭಯವನ್ನು ಸೋಲಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿ ಇದ್ದರೆ ಏನು ಬೇಕಿದ್ದರೂ ಮಾಡಬಹುದು ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ