ನಿತೀಶ್ ಕುಮಾರ್‌ನನ್ನು ಸಿಎಂ ಮಾಡಿದ್ದು ನಾನು: ಲಾಲೂ ಗುಡುಗು

ಬುಧವಾರ, 26 ಜುಲೈ 2017 (15:25 IST)
ನಿತೀಶ್ ಕುಮಾರ್‌ನನ್ನು ಮುಖ್ಯಮಂತ್ರಿ ಮಾಡಿದ್ದು ನಾನು ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ.
 
ಬಿಜೆಪಿ, ನಿತೀಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಪುತ್ರ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಯಾರೂ ಕೇಳಿಲ್ಲ ಎಂದು ತಿರುಗೇಟು ನೀಡಿದರು.
 
ತೇಜಸ್ವಿ ಯಾದವ್ ಅಪರಾಧಿಯಲ್ಲ. ಯಾವುದೇ ಕಾರಣಕ್ಕೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ನಿತೀಶ್ ಕುಮಾರ್‌ಗೆ ನೇರ ಎಚ್ಚರಿಕೆ ನೀಡಿದ್ದಾರೆ.
 
ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ತೇಜಸ್ವಿ ಯಾದವ್ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ದೂರು ದಾಖಲಿಸಿತ್ತು. ದೂರು ದಾಖಲಾದ ಹಿನ್ನೆಲೆಯಲ್ಲಿ ತೇಜಸ್ವಿ ಯಾದವ್ ರಾಜೀನಾಮೆ ನೀಡಬೇಕು ಎಂದು ಜೆಡಿಯು ಒತ್ತಾಯಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ