ನಾನು ಪ್ರಧಾನಿ ಮೋದಿ ಬೆನ್ನಿಗಿರುತ್ತೇನೆ: ಸ್ವಾಮಿ

ಬುಧವಾರ, 29 ಜೂನ್ 2016 (14:34 IST)
'ನಾನು ಸದಾ ಪ್ರಧಾನಿ ಮೋದಿ ಬೆನ್ನಿಗೆ ನಿಂತಿರುತ್ತೇನೆ, ಅವರ ನಿಲುವಿಗೆ ಬದ್ಧನಾಗಿರುತ್ತೇನೆ', ಎಂದು ತಮ್ಮ ಹೇಳಿಕೆಗಳಿಂದ ಸ್ವಪಕ್ಷವನ್ನೇ ಇಕ್ಕಟ್ಟಿಗೆ ಸಿಕ್ಕಿ ಹಾಕಿಸುತ್ತಿರುವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 
 
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ರಘುರಾಮ್ ರಾಜನ್ ಮತ್ತು ವಿತ್ತ ಸಚಿವರ ವಿರುದ್ಧ ಸ್ವಾಮಿ ಅವರ ಟೀಕೆಗೆ ಪ್ರಧಾನಿ ಮೋದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು.
 
ಸ್ವಾಮಿ ಮಾಡಿರುವ ಆರೋಪಗಳಿಗೆ ನನ್ನ ಸಹಮತವಿಲ್ಲ.ಪ್ರಚಾರಕ್ಕಾಗಿ ಒಬ್ಬರ ಮೇಲೆ ಆರೋಪ ಹೊರಿಸುವುದು ಸರಿಯಲ್ಲ, ವ್ಯವಸ್ಥೆಗಿಂತಲೂ ದೊಡ್ಡವನು ಎಂದು ಯಾರಾದರೂ ತಿಳಿದುಕೊಂಡಿದ್ದರೆ, ಇದು ಅವರ ತಪ್ಪು ತಿಳುವಳಿಕೆ. ರಾಜನ್ ಒಬ್ಬ ದೇಶಭಕ್ತ. ಸುಬ್ರಮಣಿಯನ್ ಸ್ವಾಮಿ ಅವರ ಪ್ರಚಾರದ ಹುಚ್ಚನ್ನು ಬಿಜೆಪಿ ಅನುಮೋದಿಸುವುದಿಲ್ಲ ಎಂದು ಮೋದಿ ಕಿಡಿಕಾರಿದ್ದರು.
 
ಇದಕ್ಕೆ ಪ್ರತಿಕ್ರಿಯಿಸಿರುವ ಸ್ವಾಮಿ, ನಾನು ಪ್ರಚಾರ ಬಯಸುತ್ತಿಲ್ಲ ಪ್ರಚಾರವೇ ಪಟ್ಟುಬಿಡದೆ ನನ್ನನ್ನು ಬಯಸುತ್ತಿದೆ ಎಂದು ಬಿಜೆಪಿ ಸಂಸದ  ಸ್ವಾಮಿ ಟ್ವೀಟ್ ಮಾಡಿದ್ದಾರೆ.
 
ನಾನು ಮೋದಿ ಅವರ ಬೆನ್ನಿಗೆ ನಿಂತಿದ್ದೇನೆ, ಎಂದ ಅವರು ಪತ್ರಕರ್ತರು ನನ್ನನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಕಟ್ಟುಕಥೆಗಳನ್ನು ಸೃಷ್ಟಿಸುತ್ತಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ