ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮೆಲ್ಲರಿಗೂ ದೇವರಂತಿದ್ದ ಜೆ.ಜಯಲಲಿತಾ ಅವರ ಸಾವಿನ ಕುರಿತು ಶೀಘ್ರದಲ್ಲಿಯೇ ತನಿಖೆ ನಡೆಸುವಂತೆ ಆದೇಶಿಸುತ್ತೇನೆ. ಈ ಕುರಿತು ಹೈಕೋರ್ಟ್ ನಿವೃತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುತ್ತೇನೆ. ಅಮ್ಮನ ಸಾವಿನ ಕುರಿತು ಸತ್ಯಾಂಶ ಏನಿದೆ ಎಂದು ಹೇಳುವುದು ಸರಕಾರದ ಕರ್ತವ್ಯ ಎಂದು ಸ್ಪಷ್ಟಪಡಿಸಿದರು.