ಸರಕಾರದ ಎರಡು ವರ್ಷಗಳ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರ ತನ್ನ ಅಧಿಕಾರವಧಿಯಲ್ಲಿ ಅನೇಕ ಪಾಪಕೃತ್ಯಗಳಲ್ಲಿ ತೊಡಗಿತ್ತು. ಆದರೆ, ನಾನು ಯಾವತ್ತು ಪಾಪ ಕೃತ್ಯಗಳಲ್ಲಿ ತೊಡಗುವುದಿಲ್ಲ ಎಂದು ಘೋಷಿಸಿದ್ದಾರೆ.
ನಾನು ಅಧಿಕಾರವಹಿಸಿಕೊಂಡು ಕೇವಲ ಒಂದು ವಾರದ ನಂತರ ಸರಕಾರದ ಸಾಧನೆಗಳ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸರಕಾರದ ಸಾಧನೆಗಳ ಬಗ್ಗೆ ಲೆಕ್ಕ ಕೊಡಿ ಎಂದು ಒತ್ತಾಯಿಸಿದ್ದಾರೆ. ದೇಶದಲ್ಲಿ ಕೆಲವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಆದರೆ, ಜನತೆಯಿಂದ ಆಯ್ಕೆಯಾದ ಸರಕಾರವನ್ನು ನಂಬುವುದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ಗೆ ತಿರುಗೇಟು ನೀಡಿದರು.