ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಮತ್ತೊಂದು ಟ್ವಿಸ್ಟ್

ಬುಧವಾರ, 17 ಮೇ 2017 (17:14 IST)
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿಗೆ ಕೌಟಂಬಿಕ ಕಲಹವೇ ಕಾರಣವೇ ಎನ್ನುವ ಸಂಶಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಅನುರಾಗ್ ತಿವಾರಿ ವಿವಾಹದ ಸಂದರ್ಭದಲ್ಲಿ ಪತ್ನಿಯ ಮನೆಯವರಿಂದ ಐದು ಲಕ್ಷ ರೂಪಾಯಿ ವರದಕ್ಷಿಣೆ ಪಡೆದಿದ್ದರು ಎನ್ನಲಾಗಿದೆ. ವರದಕ್ಷಿಣೆ ಪಡೆದಿರುವ ಬಗ್ಗೆ ಪತ್ನಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದಾಗಿ ಬೆದರಿಕೆಯೊಡ್ಡಿದ್ದರು ಎನ್ನಲಾಗುತ್ತಿದೆ.
 
ಒಂದು ವೇಳೆ, 50 ಲಕ್ಷ ರೂಪಾಯಿಗಳನ್ನು ನೀಡಿದಲ್ಲಿ ಮಾಧ್ಯಮಗಳ ಮುಂದೆ ಹೋಗುವುದಿಲ್ಲ ಎಂದು ಪತ್ನಿ, ಪತಿ ಅನುರಾಗ್ ತಿವಾರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪತ್ನಿಯ ವರ್ತನೆಯಿಂದ ಆಘಾತಗೊಂಡಿದ್ದ ಅನುರಾಗ್ ತಿವಾರಿ, ತೀವ್ರ ಶಾಕ್‌ಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಇದೀಗ ಮರಣೋತ್ತರ ಪರೀಕ್ಷೆ ನಡೆಯಲಿರುವುದರಿಂದ ಸತ್ಯ ಸಂಗತಿ ಬಹಿರಂಗವಾಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ