ಅನಧಿಕೃತ ಗೈರುಹಾಜರಾತಿ ಹಿನ್ನೆಲೆಯಲ್ಲಿ ಭಟ್ ಅವರನ್ನು ವಜಾಗೊಳಿಸಲಾಗಿದೆ ಎಂದು ಗುಜರಾತ್ ಸರ್ಕಾರ ಸ್ಪಷ್ಟನೆ ನೀಡಿದೆ. ಆದರೆ ಇದನ್ನು ಅಲ್ಲಗಳೆದಿರುವ ಭಟ್, "ನಾನು ಪ್ರಾಮಾಣಿಕವಾಗಿ ಮತ್ತು ಉತ್ಸಾಹದಿಂದ 27 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಸರ್ಕಾರ ಆಧಾರವಿಲ್ಲದ ಆರೋಪಗಳ ಮೇಲೆ ನೆಪ ಮಾತ್ರದ ತನಿಖೆ ನಡೆಸಿ, ಸುಳ್ಳು ಆರೋಪ ಹೊರಿಸಿ ಕರ್ತವ್ಯದಿಂದ ವಜಾ ಮಾಡಿದೆ. ಸರ್ಕಾರಕ್ಕೆ ನನ್ನ ಸೇವೆ ಬೇಕಾಗಿಲ್ಲ", ಎಂದು ಫೇಸ್ಬುಕ್ನಲ್ಲಿ ನೋವು ತೋಡಿಕೊಂಡಿದ್ದಾರೆ.
ಕೆಲಸಕ್ಕೆ ಗೈರು ಹಾಜರು ಮತ್ತು ಕಚೇರಿಯ ಕಾರನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ 2011ರಲ್ಲಿ ಸಂಜೀವ್ ಭಟ್ ಅವರನ್ನು ಗುಜರಾತ್ ಸರ್ಕಾರ ಅಮಾನುತು ಗೊಳಿಸಿತ್ತು. ತಾಯಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣಕ್ಕೆ ಮತ್ತು 2002ರ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿ ನಾನಾವತಿ ಆಯೋಗದೆದುರು ಹಾಜರಾಗಲು ತಾವು ಅಹಮದಾಬಾದ್ನಲ್ಲಿರುವುದು ಅವಶ್ಯವೆಂದು ಭಟ್ ತಮ್ಮ ಗೈರು ಹಾಜರಿ ಬಗ್ಗೆ ಸ್ಪಷ್ಟನೆ ನೀಡಿದ್ದರು.