ನಾಯಿ ಜೊತೆ ಕ್ರೀಡಾಂಗಣದಲ್ಲಿ ವಾಕಿಂಗ್ ಮಾಡಿದ್ದ ಐಎಎಸ್ ಅಧಿಕಾರಿ ಎತ್ತಂಗಡಿ

ಶುಕ್ರವಾರ, 27 ಮೇ 2022 (09:40 IST)
ನವದೆಹಲಿ: ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡುತ್ತಿದ್ದ ಕ್ರೀಡಾಳುಗಳನ್ನು ಹೊರಕಳುಹಿಸಿ ನಾಯಿ ಜೊತೆ ವಾಕಿಂಗ್ ಮಾಡಿ ದರ್ಪ ಮೆರೆದಿದ್ದ ಐಎಎಸ್ ಅಧಿಕಾರಿ ಸಂಜೀವ್ ಖೀರ್ವಾರ್ ರನ್ನು ಎತ್ತಂಗಡಿ ಮಾಡಲಾಗಿದೆ.

ಪತ್ನಿ, ಹಾಗೂ ನಾಯಿ ಜೊತೆ ವಾಕಿಂಗ್ ಮಾಡಲು ತನ್ನ ಅಧಿಕಾರ ಬಳಸಿ ಅಲ್ಲಿದ್ದ ಕ್ರೀಡಾಪಟುಗಳನ್ನು ಹೊರಕಳುಹಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೇ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನಲೆಯಲ್ಲಿ  ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ರಾತ್ರಿ 10 ಗಂಟೆಯವರೆಗೂ ಸರ್ಕಾರಿ ಸ್ವಾಮ್ಯದ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ ಅವರನ್ನು ಅರುಣಾಚಲ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ. ಈಗಲೂ ನಾಯಿಯನ್ನು ಕರೆದುಕೊಂಡು ಹೋಗುತ್ತೀರಾ ಎಂದು ನೆಟ್ಟಿಗರು ಅಧಿಕಾರಿಯನ್ನು ಲೇವಡಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ