2019 ರ ಲೋಕಸಭೆ ಚುನಾವಣೆ ಬಿಜೆಪಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತೆ ಎಂದವರು ಯಾರು ಗೊತ್ತೇ?

ಗುರುವಾರ, 12 ಜುಲೈ 2018 (10:40 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಲೇವಡಿ ಮಾಡಿದ್ದಾರೆ.

ಬಿಜೆಪಿ 2019 ರಲ್ಲಿ ಲೋಕಸಭೆ ಚುನಾವಣೆ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು. ಇದರಿಂದ ಭಾರತದಲ್ಲಿ ಅಲ್ಪ ಸಂಖ್ಯಾತರ ಪರಿಸ್ಥಿತಿ ಹೀನಾಯವಾಗಬಹುದು. ಭಾರತ ಹಿಂದೂ ಪಾಕಿಸ್ತಾನದಂತಾಗಬಹುದು ಎಂದು ತಿರುವನಂತಪುರದಲ್ಲಿ ಮಾಧ್ಯಮಗಳಿಗೆ ತರೂರ್ ಹೇಳಿಕೆ ನೀಡಿದ್ದಾರೆ.

ಆದರೆ ತರೂರ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಭಾರತವನ್ನು ಪಾಕಿಸ್ತಾನಕ್ಕೆ ಹೋಲಿಸುವ ಮೂಲಕ ಭಾರತದ ಹಿಂದೂಗಳಿಗೆ ತರೂರ್ ಅವಮಾನ ಮಾಡಿದ್ದಾರೆ. ಇದಕ್ಕಾಗಿ ರಾಹುಲ್ ಗಾಂಧಿ ತರೂರ್ ಪರವಾಗಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ