ಮನಸ್ಸಿದ್ದರೆ ಯಾವ ಕಾಯಿಲೆಯನ್ನು ಬೇಕಾದರೂ ಗೆಲ್ಲಬಹುದು-ಗಂಭೀರ ಆರೋಗ್ಯ ಸ್ಥಿತಿಯಲ್ಲಿ ಗೋವಾ ಸಿಎಂ ಟ್ವೀಟ್

ಮಂಗಳವಾರ, 5 ಫೆಬ್ರವರಿ 2019 (10:08 IST)
ಪಣಜಿ : ಮೆದೋಜೀರಕ ಗ್ರಂಥಿ ಸಮಸ್ಯೆಯಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ  ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ಕೆಲ ರ್ಷಗಳಿಂದ ಅನಾರೋಗ್ಯದಲ್ಲಿರುವ ಪರಿಕ್ಕರ್ ಪಣಜಿ, ಮುಂಬೈ, ದೆಹಲಿ, ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜನವರಿ 31 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಪರಿಕ್ಕರ್ ಅವರ ಆರೋಗ್ಯ ಉತ್ತಮವಾಗಿಲ್ಲ. ದೇವರ ಆಶೀರ್ವಾದದಿಂದ ಅವರು ಬದುಕಿದ್ದಾರೆ’ ಎಂದು ಗೋವಾದ ಉಪ ಸ್ಪೀಕರ್  ತಿಳಿಸಿದ್ದಾರೆ.


ಹಣಕಾಸು ಖಾತೆಯನ್ನು ನಿಭಾಯಿಸುತ್ತಿರುವ ಮನೋಹರ್ ಪರಿಕ್ಕರ್ ಅವರು ಕಳೆದ ವಾರ ಗೋವಾ ವಿಧಾನಸಭೆಗೆ ಮೂಗಿಗೆ ಪೈಪ್ ಹಾಕಿಕೊಂಡೆ ಬಜೆಟ್ ಮಂಡಿಸಿದ್ದರು. ಇದೀಗ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮನೋಹರ್ ಪರಿಕ್ಕರ್ ಅವರು ಮನಸ್ಸು ಒಂದಿದ್ದರೆ ಯಾವ ಕಾಯಿಲೆಯನ್ನು ಬೇಕಾದರೂ ಗೆಲ್ಲಬಹುದು ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ