ಜಲ್ಲಿಕಟ್ಟುಗೆ 2 ಬಲಿ: 60ಕ್ಕೂ ಹೆಚ್ಚು ಮಂದಿಗೆ ಗಾಯ

ಭಾನುವಾರ, 5 ಮಾರ್ಚ್ 2017 (19:42 IST)
ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಯೋಜನೆ ವೇಳೆ ಸ್ಪರ್ಧಾಳು ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುವಪ್ಪೂರ್ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡ ಕೆಲವರನ್ನ ಮೊಬೈಲ್ ಕ್ಲಿನಿಕ್`ನಲ್ಲೇ ಚಿಕಿತ್ಸೆ ನೀಡಲಾಗಿದ್ದು, ಮತ್ತೆ ಕೆಲವರಿಗೆ ಸ್ಥಳೀಯ ಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ.

ಜನವರಿ 23ರಂದು ತಮಿಳುನಾಡು ವಿಧಾನಸಭೆಯಲ್ಲಿ ಜಲ್ಲಿಕಟ್ಟು ಕ್ರೀಡೆಗೆ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ರಾಜ್ಯಾದ್ಯಂತ ಯೋಜಿಸಲಾಗುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಜಲ್ಲಿಕಟ್ಟು ಆಯೋಜನೆ ವಾಡಿಕೆಯಾಗಿದ್ದು, ಈ ವರ್ಷ ಸುಪ್ರೀಂಕೋರ್ಟ್ ನಿಷೇಧದ ಹಿನ್ನೆಲೆಯಲ್ಲಿ ಜಲ್ಲಿಕಟ್ಟು ಆಯೋಜನೆ ಸಾಧ್ಯವಾಗಿರಲಿಲ್ಲ.

ವೆಬ್ದುನಿಯಾವನ್ನು ಓದಿ