ನವದೆಹಲಿ: ನರೇಂದ್ರ ಮೋದಿ ಸರ್ಕಾರ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ಸಾಧ್ಯತೆಯಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಮುಂಚೆಯೇ ಈ ಬಗ್ಗೆ ಇಂಗಿತ ನೀಡಿದ್ದರು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2 ಲಕ್ಷದಿಂದ 5 ಲಕ್ಷಗಳಿಗೆ ಏರಿಸುವುದರಿಂದ 30 ದಶಲಕ್ಷ ಜನರಿಗೆ ಅನುಕೂಲವಾಗುತ್ತದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದರು.
ಕಡಿಮೆ ತೆರಿಗೆ ರಚನೆಯನ್ನು ಪ್ರತಿಪಾದಿಸಿದ ಜೇಟ್ಲಿ, ನೇರ ತೆರಿಗೆಯ ಪ್ರಮಾಣವನ್ನು ತಗ್ಗಿಸಬೇಕು. ಆದಾಯ ತೆರಿಗೆ ಮಿತಿಯನ್ನು 2 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ನುಡಿದಿದ್ದರು. ವಾಜಪೇಯಿ ಸರ್ಕಾರ ಬಡ್ಡಿದರವನ್ನು ಶೇ. 7ರಿಂದ 8 ನಡುವೆ ಇರಿಸಿತ್ತು. ಆದರೆ ಯುಪಿಎ ಸರ್ಕಾರ ಬಡ್ಡಿದರವನ್ನು ಶೇ. 13-14ಕ್ಕೆ ಏರಿಸಿದೆ. ಈ ಕಾರಣದಿಂದಾಗಿ ವ್ಯಾಪಾರ, ಉದ್ದಿಮೆ ನಷ್ಟದಲ್ಲಿ ನಡೆಯುತ್ತಿದೆ. ಕೆಲವು ಬಾಗಿಲು ಮುಚ್ಚಿವೆ.