ಇತ್ತೀಚೆಗೆ ಗೋವಾ ಸರಕಾರ ಅತ್ಯಾಚಾರಕ್ಕೊಳಗಾದ ಯುವತಿಯರಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆರಂಭಿಸಲು ನಿರ್ಧರಿಸಿದೆಯಲ್ಲದೇ ಅವರಿಗೆ ಪುನರ್ವಸತಿ ಕಲ್ಪಿಸುವ ನಿಯಮ ಜಾರಿಗೆ ತಂದಿದೆ. ಅದರಂತೆ, ದೇಶದ ಇತರ ರಾಜ್ಯಗಳು ಕೂಡಾ ಇಂತಹದ್ದೆ ಕಾನೂನು ಜಾರಿಗೆ ತರಬೇಕು ಎಂದು ಸಲಹೆ ನೀಡಿದೆ.
ಅತ್ಯಾಚಾರಕ್ಕೊಳಗಾದ ಬಲಿಪಶುವಿಗೆ ಪರಿಹಾರ ಅಥವಾ ಪುನರ್ವಸತಿ ಕಲ್ಪಿಸುವ ಬಗ್ಗೆ ದೇಶದ ಎಲ್ಲಾ ರಾಜ್ಯಗಳಲ್ಲಿ ಏಕರೂಪದ ಕಾನೂನು ಜಾರಿಯಲ್ಲಿಲ್ಲ. ಕೆಲ ರಾಜ್ಯಗಳು ಅತ್ಯಾಚಾರಕ್ಕೊಳಗಾದವರಿಗೆ 20 ಸಾವಿರ ರೂಪಾಯಿಗಳಿಂದ 10 ಲಕ್ಷ ರೂಪಾಯಿಗಳವರೆಗೆ ಪರಿಹಾರ ನೀಡಲಾಗುತ್ತಿದೆ. ಆದ್ದರಿಂದ, ದೇಶದ ಎಲ್ಲಾ ರಾಜ್ಯಗಳು ಏಕರೂಪದ ಕಾನೂನು ಜಾರಿಗೆ ತರುವುದು ಅನಿವಾರ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.