ಬಂಧನವಾಗಿದ್ದಾಗಿನಿಂದ ತಪ್ಪನ್ನು ಒಪ್ಪಿಕೊಳ್ಳದೇ ಶೀನಾ ಅಮೇರಿಕದಲ್ಲಿದ್ದಾಳೆ, ಆಕೆ ಸತ್ತಿಲ್ಲ ಎಂದು ವಾದಿಸುತ್ತಲೇ ಬಂದಿದ್ದ ಇಂದ್ರಾಣಿ ಹತ್ಯೆಯಲ್ಲಿ ತನ್ನ ಪಾತ್ರವಿರುವುದನ್ನು ಕೊನೆಗೂ ಒಪ್ಪಿಕೊಂಡಿದ್ದಾಳೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ. ಪ್ರಕರಣದ ಇತರ ಇಬ್ಬರು ಆರೋಪಿಗಳು ಈಗಾಗಲೇ ತಪ್ಪೊಪ್ಪಿಕೊಂಡಿರುವುದರಿಂದ ಬೇರೆ ದಾರಿ ಕಾಣದೇ ಇಂದ್ರಾಣಿ ಮಗಳ ಕೊಲೆಗೈದಿರುವುದನ್ನು ಒಪ್ಪಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.