ಮಣಿಪುರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 16 ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತೆ ಐರೋಮ್ ಶರ್ಮಿಲಾ, ಇದೀಗ ನಿರಶನ ಅಂತ್ಯಗೊಳಿಸಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಣಿಪುರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 16 ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರಕಾರ ಯಾವುದೇ ಖಚಿತ ಭರವಸೆ ನೀಡುತ್ತಿಲ್ಲ. ಆದ್ದರಿಂದ, ಸಮಸ್ಯೆಗಳನ್ನು ಪರಿಹರಿಸಲು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.