ಜೀವ ಉಳಿಸುವ ವೈದ್ಯನಿಂದ ನಡೆದಿದೆ ಇಂತಹ ನೀಚ ಕೃತ್ಯ

ಸೋಮವಾರ, 4 ಫೆಬ್ರವರಿ 2019 (06:33 IST)
ನವದೆಹಲಿ : ಜೀವ ಉಳಿಸುವ ವೈದ್ಯ ದೇವರ ಸಮಾನವೆಂದು ಅಪ್ರಾಪ್ತ ಬಾಲಕಿಯೊಬ್ಬಳು ವೈದ್ಯನ ಬಳಿ ಚಿಕಿತ್ಸೆಗೆಂದು ಬಂದರೆ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ  ನವದೆಹಲಿಯಲ್ಲಿ ನಡೆದಿದೆ.


ದೆಹಲಿಯ ರೋಹಿಣಿ ಪ್ರದೇಶದ ನಿವಾಸಿ ಜೋಗಿಂದರ್ ಸಿಂಗ್ ಬಂಧಿತ ಆರೋಪಿ. ಅಪ್ರಾಪ್ತ ಬಾಲಕಿಯೊಬ್ಬಳು ಬುಧವಾರ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದಾಗ ಜೋಗಿಂದರ್ ಸಿಂಗ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಸುಲ್ತಾನ್‍ಪುರಿ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆತನನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ