"ಡಿಎಂಕೆ ಈ ಪ್ರಕರಣದ ವಿಚಾರಣೆಯಲ್ಲಿ ಭಾಗವಹಿಸಲು ಹಕ್ಕನ್ನು ಹೊಂದಿದೆ ಎಂದು ಈ ಹಿಂದಿನ ಎರಡು ಸಂದರ್ಭಗಳಲ್ಲಿ ಸುಪ್ರೀಂಕೋರ್ಟ್ ಹೇಳಿತ್ತು. ಆದ್ದರಿಂದ ಜಯಾರವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತದೆ", ಎಂದು ಭರವಸೆ ನೀಡುತ್ತಿರುವುದಾಗಿ, ಕರುಣಾನಿಧಿ ಹೇಳಿಕೆ ನೀಡಿದ್ದಾರೆ.
ಮೇಲ್ಮನವಿ ಅರ್ಜಿ ಸಲ್ಲಿಸಲು ಡಿಎಂಕೆ ದಿನಾಂಕ ಮತ್ತು ಸಮಯವನ್ನು ನಿಗದಿಗೊಳಿಸಿಲ್ಲ. ಯಾವುದೇ ಕ್ಷಣದಲ್ಲಿ ಸಹ ಅದು ಮೇಲ್ಮನವಿ ಸಲ್ಲಿಸಬಹುದು. ಈ ದಿಶೆಯಲ್ಲಿ ಕರ್ನಾಟಕ ಸರ್ಕಾರ ಮೊದಲ ಹೆಜ್ಜೆಯನ್ನಿಡುವ ಬಗ್ಗೆ ಡಿಎಂಕೆ ನಂಬಿಕೆ ಹೊಂದಿದೆ, ಎಂದು ಪಕ್ಷದ ಮೂಲಗಳು ತಿಳಿಸಿವೆ.