ಘಟನೆಯನ್ನು ಖಂಡಿಸಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸದನದ ಕಲಾಪ ಬಹಿಷ್ಕರಿಸಿ ಹೊರ ಹೋಗಿದ್ದಾರೆ. ಘಟನೆ ಕುರಿತು ವಿರೋಧ ವ್ಯಕ್ತ ಪಡಿಸಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, "ವಿಧಾನಸಭೆಯಲ್ಲಿ ಹಲ್ಲೆ ಮಾಡಲು ಬರುವುದಲ್ಲ. ತಪ್ಪು ಮಾಡಿದ್ದರೆ ಚರ್ಚೆಯಾಗಲಿ. ಅದನ್ನು ಬಿಟ್ಟು ಹಲ್ಲೆ ನಡೆಸುವುದು ತಪ್ಪು", ಎಂದಿದ್ದಾರೆ.