ಪ್ರಧಾನಿಗೆ ಪತ್ರ ಬರೆದಿರುವ ಜಯಲಲಿತಾ, ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಕಾವೇರಿ ನ್ಯಾಯ ಮಂಡಳಿಯು ವರ್ಷಕ್ಕೆ 94 ಟಿಎಂಸಿ ನೀರನ್ನು ಬಿಡುಗಡೆಗೊಳಿಸಬೇಕೆಂದು ಆದೇಶಿಸಿತ್ತು. ಆದರೆ ತೀರ್ಪಿನ ಪ್ರಕಾರ ಕರ್ನಾಟಕವು ಈ ಬಾರಿ ಕೇವಲ 66.443 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಲಾಗಿದ್ದು, ಇನ್ನೂ 27.57 ಟಿಎಂಸಿ ನೀರು ಬಿಡುಗಡೆಗೊಳಿಸಬೇಕಿರುವುದು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.