ಕಳೆದ 2011ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಹಲವಾರು ಭರವಸೆಗಳನ್ನು ಘೋಷಿಸಲಾಗಿತ್ತು. ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದಾಗಿಯೂ ಭರವಸೆ ನೀಡಲಾಗಿತ್ತು. ಅದರಂತೆ, ಇಂದು ತಮಿಳುನಾಡು ಸರಕಾರ ಯೋಜನೆ ಘೋಷಿಸಿ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದಂತಾಗಿದೆ ಮುಖ್ಯಮಂತ್ರಿ ಜಯಲಲಿತಾ ಸಂತಸ ವ್ಯಕ್ತಪಡಿಸಿದ್ದಾರೆ.