ಹೃದಯಾಘಾತಕ್ಕೊಳಗಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಗಡಿ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಗಡಿ ಜಿಲ್ಲೆ ಚಾಮರಾಜನಗರದಿಂದ ತಮಿಳುನಾಡಿಗೆ ತೆರಳಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮೇಲೆ ದಾಳಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಅನಾರೋಗ್ಯದಿಂದಾಗಿ ಕಳೆದ ಸಪ್ಟೆಂಬರ್ ತಿಂಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಲಲಿತಾ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾಗಿತ್ತು. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು ಇಂದು ಮುಂಜಾನೆ ಆ್ಯಂಜಿಯೋಗ್ರಾಮ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಇಂದು ಮುಂಜಾನೆ 10 ಗಂಟೆಗೆ ದೆಹಲಿಯಿಂದ ಏಮ್ಸ್ ವೈದ್ಯರ ತಂಡ ಜಯಾ ಚಿಕಿತ್ಸೆಗಾಗಿ ಆಗಮಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ