ತನಿಖೆ ಮಹತ್ವದ ಘಟ್ಟ ತಲುಪಿದ್ದು ಸಾಗುತ್ತಿದ್ದು, ಇದೊಂದು ಯೋಜಿತ ಹತ್ಯೆ. ಆದರೆ ಪೂರ್ವ ನಿಯೋಜಿತ ಅಲ್ಲ ಎಂಬಂತೆ ಗೋಚರಿಸುತ್ತಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮೇಲ್ವಿಚಾರಣೆ ನಡೆಸುತ್ತಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ಪದ್ಮಕುಮಾರ್ ಹೇಳಿದ್ದಾರೆ.
ಎಪ್ರಿಲ್ 28 ರಂದು ನಡೆದ ಈ ಹತ್ಯೆಯನ್ನು 2012ರ ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರಕ್ಕೆ ಹೋಲಿಸಲಾಗುತ್ತಿದ್ದು ಯುವತಿಯ ಕುತ್ತಿಗೆ, ಎದೆ ಮತ್ತು ಅನೇಕ ಕಡೆಗಳಲ್ಲಿ 13 ಗಾಯದ ಗುರುತುಗಳು ಮತ್ತು ಕುತ್ತಿಗೆ ಹಿಸುಕಿದ ಗುರುತುಗಳಿವೆ ಎಂದು ಎರ್ನಾಕುಲಮ್ ವಿಭಾಗ ಐಜಿ ಮಹಿಪಾಲ್ ಯಾದವ್ ತಿಳಿಸಿದ್ದಾರೆ. ಆದರೆ ಕೆಲವು ವರದಿಗಳ ಪ್ರಕಾರ ಆಕೆಯ ದೇಹದಲ್ಲಿ 30 ಗಾಯದ ಗುರುತುಗಳಿವೆ.