ಬಿಜೆಪಿ ಶಾಸಕ ಓಪಿ.ಶರ್ಮಾ ವರ್ತನೆಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿಷಾದ

ಬುಧವಾರ, 17 ಫೆಬ್ರವರಿ 2016 (16:10 IST)
ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವುದು ಸರಿಯಲ್ಲ. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಕೇಂದ್ರ ಟೆಲಿಕಾಂ ಖಾತೆ ಸಚಿವ ರವಿಶಂಕರ್ ಪ್ರಸಾದ್ ವಿಷಾದ ವ್ಯಕ್ತಪಡಿಸಿದ್ದಾರೆ.
 
ಶಾಸಕ ಶರ್ಮಾ ವಿರುದ್ಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಬಿಜೆಪಿ ಪಕ್ಷ ಕೂಡಾ ಇಂತಹ ವರ್ತನೆಯನ್ನು ಖಂಡಿಸುತ್ತದೆ. ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ದೆಹಲಿ ಪೊಲೀಸರು ಕಠಿಣ ಕ್ರಮ ಜರುಗಿಸುವುದನ್ನು ಸಮರ್ಥಿಸಿಕೊಂಡರು.
 
ವಿಶ್ವವಿದ್ಯಾಲಯದ ಅವರಣಗಳಲ್ಲಿ ದೇಶದ್ರೋಹದ ಚಟುವಟಿಕೆಗಳನ್ನು ಮೋದಿ ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
 
ಜೆಎನ್‌ಯು ವಿದ್ಯಾರ್ಥಿಗಳ ಸಂಘಧ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಬಂಧನ ನ್ಯಾಯಯುತವಾಗಿದ್ದು, ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರದ್ರೋಹಿಗಳನ್ನು ಬೆಂಬಲಿಸುತ್ತಿದ್ದಾರೆ. ಜೆಎನ್‌ಯು ವಿದ್ಯಾರ್ಥಿಗಳು ರಾಷ್ಟ್ರದ್ರೋಹದ ಘೋಷಣೆಗಳನ್ನು ಕೂಗುತ್ತಿರುವ ಬಗ್ಗೆ ರಾಹುಲ್ ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದರು. 
 

ವೆಬ್ದುನಿಯಾವನ್ನು ಓದಿ