ಹಿಮಾಚಲ ಸಿಎಂ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿ ಸಂದೇಶ: ಪತ್ರಕರ್ತನ ಬಂಧನ

ಶುಕ್ರವಾರ, 6 ನವೆಂಬರ್ 2015 (16:56 IST)
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಪತ್ರಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿಂಗ್ ಅವರನ್ನು ಅಪಮಾನ ಮಾಡುವ ಉದ್ದೇಶದಿಂದ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿ ಕಮೆಂಟ್‌ಗಳನ್ನು ಪೋಸ್ಟ್ ಮಾಡಿದ ಆರೋಪಿ ರಜನೀಶ್ ಶರ್ಮಾ ಮಂಡಿ ಟೌನ್ ಪ್ರದೇಶದಲ್ಲಿ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾನೆ. 
 
ಕಾಂಗ್ರೆಸ್ ಮುಖಂಡ ಪುರನ್ ಚಾಂದ್ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ರಜನೀಶ್ ಶರ್ಮಾನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ