ಉತ್ತರ ಪ್ರದೇಶದಲ್ಲಿ ಇಂದು ಮತ್ತೊಂದು ರೈಲು ದುರಂತ
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಳ್ಳುಗಾಡಿಯೊಂದು ರೈಲಿನ ಎಂಜಿನ್ ಗೆ ಡಿಕ್ಕಿಯಾದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ದುರಂತ ಸಂಭವಿಸಿತ್ತು. ಇದೀಗ ಒಂದೇ ವಾರದಲ್ಲಿ ಎರಡನೇ ಬಾರಿಗೆ ಹಳಿ ತಪ್ಪಿ ದುರಂತ ಸಂಭವಿಸಿದೆ.