ಕಮಲ್ಹಾಸನ್ಗೆ ಏನೂ ಗೊತ್ತಿಲ್ಲ: ಸಿಎಂ ಪಳನಿ ಸ್ವಾಮಿ ವಾಗ್ದಾಳಿ
ಬುಧವಾರ, 19 ಜುಲೈ 2017 (17:06 IST)
ಪಂಚಭಾಷಾ ನಟ ಕಮಲ್ಹಾಸನ್ಗೆ ಏನೂ ಗೊತ್ತಿಲ್ಲ. ರಾಜಕೀಯ ಪ್ರವೇಶಿಸಿದ ನಂತರ ಬೇಕಾದ್ರೆ ಮಾತನಾಡಲಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿ ಸ್ವಾಮಿ ಟಾಂಗ್ ನೀಡಿದ್ದಾರೆ.
ತಮಿಳುನಟ ಕಮಲ್ ಹಾಸನ್ ರಾಜಕೀಯ ಪ್ರವೇಶ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಕಮಲ್ಹಾಸನ್ಗೆ ರಾಜಕೀಯದ ಬಗ್ಗೆ ಗಂಧ ಗಾಳಿ ಗೊತ್ತಿಲ್ಲ. ರಾಜಕೀಯಕ್ಕೆ ಬಂದ ನಂತರ ನೋಡೋಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ತಮಿಳುನಾಡು ಸರಕಾರದ ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಮಲ್ ಹಾಸನ್ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕಮಲ್ಹಾಸನ್ ಹೇಳಿಕೆಗೆ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದ ಸಚಿವ ವೇಲುಮಣಿ, ಮೊದಲು ನಟಿಸಿದ ಚಿತ್ರಗಳಿಗೆ ಪಡೆದ ಹಣದಲ್ಲಿ ತೆರಿಗೆ ಪಾವತಿಸಿದ್ದೀರಾ? ನಿಮ್ಮ ಬಳಿ ದಾಖಲೆಗಳಿದ್ದಲ್ಲಿ ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವುದನ್ನು ಸಾಬೀತುಪಡಿಸಿ ಎಂದು ಸವಾಲ್ ಹಾಕಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.