ಇಂದು 15 ನೇ ಕಾರ್ಗಿಲ್ ವಿಜಯೋತ್ಸವ ದಿನ. ಮೈ ಕೊರೆವ ಚಳಿಯಲ್ಲಿ, ರಕ್ತ ಹೆಪ್ಪುಗಟ್ಟಿಸುವ ಹಿಮದ ರಾಶಿಯ ನಡುವೆ ವೀರಾವೇಶದಿಂದ ಹೋರಾಡಿ, ಮಾತೃಭೂಮಿಗಾಗಿ ಮಣ್ಣಲ್ಲಿ ಮಣ್ಣಾದ ಸಾವಿರಾರು ಸೈನಿಕರು ನಮಗೆ ನೀಡಿ ಹೋದ ವಿಜಯದ ದಿನ. ದೇಶವಿದನ್ನು ಅಭಿಮಾನ ಮತ್ತು ನೋವಿನೊಂದಿಗೆ ಆಚರಿಸುತ್ತಿದೆ. ನಮಗಾಗಿ ಮಡಿದವರ ನೆನಸಿ ತುಂಬಿ ಬರುವ ಕಣ್ಣೀರಿನ ನಡುವೆ ಅವರ ತ್ಯಾಗ, ಧೈರ್ಯ, ಸಾಹಸ, ಬಲಿದಾನದ ನೆನೆದು ಹೃದಯ ಹೆಮ್ಮೆಯಿಂದ ಬೀಗುತ್ತದೆ.
ಸೇನಾ ಮುಖ್ಯಸ್ಥ ಬಿಕ್ರಮ್ ಸಿಂಗ್, ನೌಕಾದಳದ ಮುಖ್ಯಸ್ಥ ರಾಬಿನ್ ಧೋವನ್ ಮತ್ತು ವಾಯುಸೇನೆ ವರಿಷ್ಠ ಅರುಪ್ ರಹಾ, ಮತ್ತೀತರ ಗಣ್ಯರು ಕೂಡ ವೀರ ಯೋಧರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದರು.