ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರಕಾರದಿಂದ ನಿರ್ದೇಶನವಿರದಿದ್ದಲ್ಲಿ ಹಿಂಸಾಚಾರ ನಡೆಯುವಾಗ ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಾಗಿರುತ್ತಿರಲಿಲ್ಲ ಎಂದು ಕಿಡಿಕಾರಿದರು.
ಪಟಿಯಾಲಾ ಕೋರ್ಟ್ನಲ್ಲಿ ಪತ್ರಕರ್ತರು ಮತ್ತು ಜೆಎನ್ಯು ವಿದ್ಯಾರ್ಥಿಗಳ ಮೇಲೆ ನಡೆದ ದಾಳಿ ಸುಪ್ರೀಂಕೋರ್ಟ್ಗೆ ಸವಾಲಾಗಿ ಪರಿಣಮಿಸಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ.